ಹುಬ್ಬಳ್ಳಿ :
ಜನತಾದಳ ಜಾತ್ಯತೀತ ಪಕ್ಷದ (JDS) ವತಿಯಿಂದ ಹುಬ್ಬಳ್ಳಿ ನಗರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಇಂದು ಪ್ರತಿಭಟನೆ ಮಾಡಲಾಯಿತು.
ಹುಬ್ಬಳ್ಳಿ ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಡಬಲ್ ಇಂಜಿನ್ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ರಸ್ತೆಯ ಮೇಲೆ ಕುಳಿತು ಚಹಾ ಮಾಡಿ ಸೇವಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿ ಆಕ್ರೋಶ ವ್ಯಕ್ತ ಪಡಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಅಕಾಂಕ್ಷಿ ರಾಜು ನಾಯಕವಾಡಿ, ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಸವರಾಜ್ ಕಬಡ್ಡಿ, Siddi Tv, ಹುಬ್ಬಳ್ಳಿ
Tags
ರಾಜಕೀಯ