Siddi Tv : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ


ಹವಾಮಾನ ವರದಿ

********************************

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ,ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನ ಗಾಳಿ ಬೀಸುತ್ತಿದ್ದು, ದಕ್ಷಿಣ ಒಳನಾಡಿನಲ್ಲೂ ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಚಿಕ್ಕಮಗಳೂರು ಮೈಸೂರು ಹಾಸನ ಕೋಲಾರ ಮಂಡ್ಯ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉಡುಪಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್.

Previous Post Next Post

Contact Form

f="https://unpkg.com/video.js/dist/video-js.css" rel="stylesheet">