ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!
ಕೇರಳ ಕಳಮಶೇರಿಯ ಕನ್ವೇಶನ್ ಹಾಲ್ನಲ್ಲಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 2ಕ್ಕೆ ಏರಿಕೆಯಾಗಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಸಣ್ಣ ಪುಟ್ಟ ಗಾಯಗೊಂಡ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇರಳದಲ್ಲಿನ ಬಾಂಬ್ ಸ್ಫೋಟದ ತನಿಖೆ ಆರಂಭಗೊಂಡಿದೆ. ಕೇಂದ್ರದ ತನಿಖಾ ಸಂಸ್ಥೆ ತಂಡ ಕೇರಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದೆ. ಕಳಮಶೇರಿಯ ಕನ್ವೆಶನ್ ಹಾಲ್ನಲ್ಲಿ ನಡೆದ ಸ್ಫೋಟದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಹಲವು ಸ್ಥಿತಿ ಗಂಭೀರವಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
ಸ್ಪೋಟದಲ್ಲಿ ಗಾಯಗೊಂಡ 41 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐವರು ಸೇರಿದಂತೆ ಒಟ್ಟ 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 12 ವರ್ಷದ ಬಾಲಕಿ ಹಾಗೂ 53 ವರ್ಷದ ಮಹಿಳೆ ಶೇಕಡಾ 95 ರಷ್ಟು ಸುಟ್ಟ ಗಾಯಗಳಿಂದ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ.
ಸಹನೆಯನ್ನು ಗಳಿಸಿಕೊಳ್ಳುವುದರ ಕುರಿತಾಗಿ ಕೇರಳದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿಯೇ ಬಾಂಬ್ ಸ್ಫೋಟ ಸಂಭವಿಸಿತ್ತು. ಸಹನೆಯ ಕುರಿಯಾಗಿ ತರಬೇತಿ ನೀಡಲು ಕಲಮಶ್ಶೇರಿಯಲ್ಲಿ 3 ದಿನಗಳ ಅಂತಾರಾಷ್ಟ್ರೀಯ ಕ್ರಿಶ್ಚಿಯನ್ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನ ಎಲ್ಲರೂ ಪ್ರಾರ್ಥನೆ ನಡೆಸುತ್ತಿದ್ದ ಸಮಯದಲ್ಲೇ ಸ್ಪೋಟ ಸಂಭವಿಸಿದೆ. ಈ ವಿಚಾರ ಸಂಕಿರಣವನ್ನು ಪ್ರಮುಖವಾಗಿ ಜಗತ್ತಿನಲ್ಲಿ ಸಹನೆ ಕಡಿಮೆಯಾಗುತ್ತಿರುವ ಕಾರಣ ಹಲವು ವಿಧ್ವಂಸಕ ಕೃತ್ಯಗಳು ನಡೆಯುತ್ತಿದ್ದು ಇದನ್ನು ತಡೆಗಟ್ಟುವ ಉದ್ದೇಶದಿಂದ ಸಹನೆಯನ್ನು ಬೆಳೆಸುವ ಸಲುವಾಗಿ ಏರ್ಪಡಿಸಲಾಗಿತ್ತು.
.jpeg)