Kurugodu : ಕಾನಿಪ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾಗಿ ಎಂ ಅಣ್ಣಯ್ಯ ಸ್ವಾಮಿ ಆಯ್ಕೆ


ಕಾನಿಪ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾಗಿ ಎಂ ಅಣ್ಣಯ್ಯ ಸ್ವಾಮಿ ಆಯ್ಕೆ

ಕುರುಗೋಡು :ಪಟ್ಟಣದ ನೀರಾವರಿ ಇಲಾಖೆಯ ಐಬಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಕುರುಗೋಡು ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಭಾನುವಾರ ಜರುಗಿತು.

ಕಾನಿಪ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಶ್ರೇಷ್ಠವಾಗಿದ್ದು, ಇಂತಹ ವೃತ್ತಿ ಸಲ್ಲಿಸುವ ಪ್ರತಿಯೊಬ್ಬರೂ ಪಕ್ಷತೀತಿ, ಜಾತ್ಯತೀತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಪ್ರಾಮಾಣಿಕವಾಗಿ ವರದಿ ಮಾಡಲು ಮುಂದಾಗಬೇಕು ಎಂದರು.

ನಂತರ ಜಿಲ್ಲಾಧ್ಯಕ್ಷ ಕುಂದೂಕೂರು ರಾಮುಡು, ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದರಾಮಪ್ಪ ಸಿರಿಗೇರಿ, ರಾಜ್ಯ ಉಪಾಧ್ಯಕ್ಷ ಇಸಾಕ್ ಮಾತನಾಡಿದರು.

ಪದಾಧಿಕಾರಿಗಳ ಆಯ್ಕೆ:ಜಿಲ್ಲಾ ಉಪಾಧ್ಯಕ್ಷರಾಗಿ ಕೆ.ವೀರಭದ್ರಗೌಡ,ತಾಲೂಕು ಅಧ್ಯಕ್ಷ ಎಂ.ಅಣ್ಣಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿ ಎನ್.ಬಸವರಾಜ್, ಉಪಾಧ್ಯಕ್ಷ ಎನ್.ಸಿದ್ದಯ್ಯ, ಖಜಾಂಚಿ ಎಂ.ಚಂದ್ರಶೇಖರ, ಸಹ ಕಾರ್ಯದರ್ಶಿ ಲೋಕೇಶ್, ಕಾರ್ಯಕಾರಿ ಮಂಡಳಿ ಸದಸ್ಯ ಜಾನೂರು ರಾಜಸಾಬ್, ಆಶೋಕ, ಚಾನಾಳ್ ಕಿರಣ್ ಕುಮಾರ್, ಹೆಚ್.ಶೇಖರ್, ಬಸವರಾಜ ರವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಕೆ.ಭೀಮಣ್ಣ, ಉಪಾಧ್ಯಕ್ಷ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ಇದ್ದರು.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">