ಗಣೇಶೋತ್ಸವಕ್ಕೆ ಹೆಚ್ಚಿದ ಪೊಲೀಸ್ ಭದ್ರತೆ
ನಗರದಲ್ಲಿ ಪೊಲೀಸ್ ಸರ್ಪಗಾವಲು,ಸಿಸಿ ಟಿವಿ ಕಣ್ಗಾವಲು
ಕಂಪ್ಲಿ ನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಇಂದು ಮತ್ತು ನಾಳೆ ನಡೆಯಲಿದ್ದು, ನಗರದಾದ್ಯಂತ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಿದೆ.
ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ಕಣ್ಗಾವಲನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಲದೆ, ಮೆರವಣಿಗೆ ಮಾರ್ಗದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸಜ್ಜಾಗಿದ್ದಾರೆ.