Kampli : ಅನಾಮಧೇಯ ವ್ಯಕ್ತಿ ಮೃತ : ವಾರಸುದಾರರ ಪತ್ತೆಗೆ ಮನವಿ



ಅನಾಮಧೇಯ ವ್ಯಕ್ತಿ ಮೃತ : ವಾರಸುದಾರರ ಪತ್ತೆಗೆ ಮನವಿ

ಕಂಪ್ಲಿ | ಮಾ.22

ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಳಹಳ್ಳಿ ತಾಂಡದ ಬಸ್ ನಿಲ್ದಾಣದ ಸಮೀಪ ಅನಾರೋಗ್ಯದಿಂದ ಬಳಲುತ್ತಿದ್ದ ಅನಾಮಧೇಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ವಾರಸುದಾರರ ಪತ್ತೆಗೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಚಹರೆ ಗುರುತು:

  • ವಯಸ್ಸು: ಅಂದಾಜು 55-60 ವರ್ಷ
  • ಎತ್ತರ: ಸುಮಾರು 4.3 ಅಡಿ
  • ಕೂದಲು: ಕಪ್ಪು-ಬಿಳಿ ಮಿಶ್ರಿತ
  • ಮೈಬಣ್ಣ: ಕಪ್ಪು
  • ಉಡುಪು: ಕಡು ನೀಲಿ ಟಿ-ಶರ್ಟ್ ಮತ್ತು ಪ್ಯಾಂಟ್

ಘಟನೆ ವಿವರ:

08-03-2026 ರಂದು ಅರಳಹಳ್ಳಿ ತಾಂಡದ ಬಸ್ ನಿಲ್ದಾಣದ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆಯ ಮೇರೆಗೆ 09-03-2026 ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೇ, 11-03-2026 ರಂದು ಬೆಳಿಗ್ಗೆ 11:50 ಗಂಟೆಗೆ ಮೃತಪಟ್ಟಿದ್ದಾರೆ.

 ಈ ಕುರಿತು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾಹಿತಿ ಇದ್ದರೆ ಸಂಪರ್ಕಿಸಿ:

📞 ಪೊಲೀಸ್ ಠಾಣೆ: 8277977722

📞 ಕಂಟ್ರೋಲ್ ರೂಮ್: 9480803000

📞 ಪೊಲೀಸ್ ಇನ್ಸ್‌ಪೆಕ್ಟರ್: 9480803038

ವರದಿ: ಸಿದ್ದಿ ಟಿವಿ

Previous Post Next Post

Contact Form

f="https://unpkg.com/video.js/dist/video-js.css" rel="stylesheet">